April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya
error: Content is protected !!