24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!