July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!