ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya
error: Content is protected !!