July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ,: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟ ನದಿಯಲ್ಲಿ ಸಾವಿರಾರು ಸಂಖ್ಯೆಯ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನಗೊಂಡಿರುವುದಲ್ಲದೆ ಪಕ್ಕದಲ್ಲಿ ಹರಿಯುತ್ತಿರುವ ನದಿಯ ಭಾಗಗಳಲ್ಲಿ ಕೂಡ ವಸ್ತ್ರಗಳು ತೇಲಿಕೊಂಡು ಬಂದು ಇಕ್ಕೆಲಗಳಲ್ಲಿ ಶೇಖರಣೆಗೊಂಡಿರುತ್ತದೆ. ಇದನ್ನು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸ್ವಚ್ಛತಾ ಕಾರ್ಯ ಜೂ16ರಂದು ನಡೆಸಿದರು.

ನದಿಯಲ್ಲಿ ಸ್ನಾನ ಮಾಡತಕ್ಕಂತಹ ತಳಭಾಗದಲ್ಲಿ ಬಿದ್ದಿದ್ದ ಸಾವಿರಾರು ಬಟ್ಟೆಗಳನ್ನ ಮೇಲಕ್ಕೆ ತಂದ ಸ್ವಯಂಸೇವಕರು ಟ್ರ್ಯಾಕ್ಟರ್ ನಲ್ಲಿ ಅದನ್ನು ತುಂಬಿಸಿ ಕೊಂಡೊಯ್ದರು. ಭಕ್ತಾದಿಗಳು ತೀರ್ಥ ಸ್ಥಾನ ಮಾಡಿದಂತಹ ಸಂದರ್ಭದಲ್ಲಿ ದೇವಳದ ವತಿಯಿಂದ ಪ್ರತಿವರ್ಧಕದ ಮೂಲಕ ಎಷ್ಟೇ ಎಚ್ಚರಿಕೆ ನೀಡಿದರು ಮತ್ತೆ ಅದೇ ಚಾಳಿಯನ್ನು ಸ್ಥಾನ ಮಾಡತಕ್ಕಂಥ ಭಕ್ತಾದಿಗಳು ಮಾಡುತ್ತಿರುವುದು ವಿಷಾದನೆಯಾಗಿದೆ.

ಈ ನಿಟ್ಟಿನಲ್ಲಿ ಶ್ರೀ ದೇವಳದ ವತಿಯಿಂದ ಕಠಿಣ ಕ್ರಮವನ್ನು ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಸಾರ್ವಜನಿಕರು ತಿಳಿಯಪಡಿಸಿರುತ್ತಾರೆ. ಇಂದು ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರು ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲೀಜನ್ನ ಅಧ್ಯಕ್ಷರಾದ ಡಾ. ರವಿ ಕಕ್ಕೆಪದವು, ಸೀನಿಯರ್ ಚೇಂಬರ್ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ, ಸಮಾಜ ಸೇವಾ ಟ್ರಸ್ಟ್ ನ ಸದಸ್ಯರುಗಳು ಭಾಗವಹಿಸಿದ್ದರು.

Related posts

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya
error: Content is protected !!