July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya
error: Content is protected !!