22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಬೆಳ್ತಂಗಡಿಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಯೂತ್ ತರಬೇತಿ ಕಾರ್ಯಕ್ರಮ ಜೂ.17 ರಂದು ನಡೆಯಿತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ) ಅಳದಂಗಡಿ ಇದರ ನಿರ್ದೇಶಕ ವಿಶ್ವನಾಥ್ ಹೊಳ್ಳ ಬಳಂಜ ಉದ್ಘಾಟಿಸಿ ಶುಭ ಹಾರೈಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 35 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ವಹಿಸಿ, ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ ತರಬೇತಿಯ ಮಹತ್ವವನ್ನು ವಿವರಿಸಿ ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯ ಪ್ರಯೋಜನದ ಬಗ್ಗೆ ವಿವರಿಸಿ, ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆಯಲ್ಲಿ ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್ ಉಪಸ್ಥಿತರಿದ್ದರು. ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷ ನಾರಾಯಣ ಶೆಟ್ಟಿ, ತರಬೇತಿದಾರರ ಪರಿಚಯವನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್, ಜೆಸಿ ವಾಣಿಯನ್ನು ದೀಪ್ತಿ ಕುಲಾಲ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷ ಶುಭಾಶ್ಚಂದ್ರ ಎಮ್ ಪಿ ಭಾಗವಹಿಸಿದರು. ಜೊತೆ ಕಾರ್ಯದರ್ಶಿಗಳಾದ ರಾಮಕೃಷ್ಣ ಧನ್ಯವಾದವಿತ್ತರು.

Related posts

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!