July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದುದರಿಂದ ಈಗ ಇರುವ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಮೊದಲಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಯವರಿಗೆ ಮನವಿಯನ್ನು ಸಲ್ಲಿಸಿದರು.

Related posts

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
error: Content is protected !!