ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಭಾರತೀಯ ಸೇವಾದಳ ಮತ್ತು ಎನ್‌ ಸಿ ಸಿ ಘಟಕವನ್ನು ಜೂ. 15 ರಂದು ಉದ್ಘಾಟಿಸಲಾಯಿತು. ಗಿಡ ನೆಡುವುದರ ಮೂಲಕ ಕಾರ್ಯಕ್ರಮವು ಚಾಲನೆಗೊಂಡಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಟಿ ಎಸ್ ಮಂಜೇಗೌಡ ಜಿಲ್ಲಾ ಸಂಘಟಿತರು ಭಾರತೀಯ ಸೇವಾದಳ ಇವರು ಉಪಸ್ಥಿತರಿದ್ದು ಸೇವಾದಳದಲ್ಲಿ ನಡೆಯುವ ಕಾರ್ಯಕ್ರಮ ಮತ್ತು ರಾಷ್ಟ್ರಧ್ವಜದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ಸೇವಾದಳದ ವಿದ್ಯಾರ್ಥಿಗಳಿಗೆ ಭಾರತೀಯ ಸೇವಾದಳದ ಎಲ್ಲಾ ಶಿಸ್ತುಗಳನ್ನು ಕಲಿತು ದೇಶದ ಒಂದು ಒಳ್ಳೆಯ ಪ್ರಜೆಗಳಾಗಿ ಬಾಳಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಫ್ರಾನ್ಸಿಸ್ ವಿ ವಿ ಈ ವಿದ್ಯಾಸಂಸ್ಥೆ ಇನ್ನಷ್ಟು ಉತ್ತಮ ಮಟ್ಟದಲ್ಲಿ ಬೆಳೆದು ಎಲ್ಲರಿಗೂ ಮಾದರಿಯಾಗಲಿ ಎಂದು ಶುಭ ಹಾರೈಸಿದರು. ಶಾಲೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಎನ್‌ಸಿಸಿ ಮತ್ತು ಸೇವಾದಳದ ಮಹತ್ವವನ್ನು ತಿಳಿಸಿದರು. ಅದೇ ರೀತಿ ಈ ಕಾರ್ಯಕ್ರಮದಲ್ಲಿ ಭಾರತೀಯ ಸೇವಾದಳ ಬೆಳ್ತಂಗಡಿಯ ಕಾರ್ಯದರ್ಶಿಯಾದ ಗಂಗಾರಾಣಿ ಮತ್ತು ನಿಟ್ಟಡೆ ಕ್ಲಸ್ಟರ್ ಸಿ ಆರ್ ಪಿ ಆರತಿ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಏನ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ವೇತ ಮತ್ತು ಕಿರಿಯ ಪ್ರಾಥಮಿಕ ವಿಭಾಗದ ಉಪ ಮುಖ್ಯ ಶಿಕ್ಷಕಿ ಶ್ವೇತ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ, ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ಧನ್ಯವಾದವಿತ್ತರು.

Related posts

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಆ.8: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya
error: Content is protected !!