ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆಯು ಜೂ.18 ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಎಲ್ಲಾ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಟ್ಟಣ ಪಂಚಾಯತಿ ಸದಸ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!