23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya
error: Content is protected !!