26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya
error: Content is protected !!