ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ವೇಣೂರು: ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ) ಹೊಕ್ಕಾಡಿಗೋಳಿ ಸಿದ್ದಕಟ್ಟೆ ಇವರ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಮಾಜ ಸೇವೆಯಾಗಿ ಸಮಾಜದ ಬಡ ಕುಟುಂಬದ 40 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ತೀರಾ ಬಡತನದಿಂದ ಇರುವ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕಿನ್ಯ ಮೂಲ್ಯರವರ ಮನೆಯ ಮೇಲ್ಚಾವಣಿ ದುರಸ್ತಿ ಹಾಗೂ ಸಿಮೆಂಟ್ ಸೀಟ್ ಅಳವಡಿಸಲಾಯಿತು.

ಸಂಘದ ಅಧ್ಯಕ್ಷ ನಾರಾಯಣ ಕುಲಾಲ್ ಪಿಲಂ, ಹಿರಿಯರಾದ ಕುಂಞ್ಞಪ್ಪ ಮೂಲ್ಯ ಪೂಂಜಾ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!