July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

ಗುರಿಪಳ್ಳ: ಸರಕಾರಿ ಉನ್ನತೀಕರಿಸಿದ ಹಿ.ಪ್ರ‌.ಶಾಲೆ ಗುರಿಪಳ್ಳದಲ್ಲಿ ಶಾಲಾ ಮಕ್ಕಳ ಪೋಷಕರಿಗಾಗಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿಶೇಷ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿ ವಹಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ರಾಷ್ಟ್ರಪ್ರಶಸ್ತಿ ವಿಜೇತ ಮುಖ್ಯಶಿಕ್ಷಕ ಎಡ್ವರ್ಡ್ ಡಿಸೋಜ ರವರು ಮಾತನಾಡಿ ಸರಕಾರಿ ಶಾಲೆ ನಮಗೆ ಯಾಕೆ ಬೇಕು ಯಾವ ರೀತಿಯಾಗಿ ಸರಕಾರಿ ಶಾಲೆಯನ್ನು ಉಳಿಸಬಹುದು ಎಂಬ ವಿಚಾರದಲ್ಲಿ ಅಧ್ಬುತವಾಗಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಗುರುವಾಯನಕೆರೆ ಕ್ಲಸ್ಟರ್ ಸಿಆರ್ ಪಿ ರಾಜೇಶ್ ರವರು ಮಾತನಾಡಿ ಶಾಲೆ ಬೆಳೆಯಬೇಕಾದರೆ ಊರವರು ಹಾಗೂ ಇಲಾಖೆ ಜೊತೆಗೂಡಿ ಕೆಲಸ ಮಾಡಬೇಕು ಇದು ನಮ್ಮ ಶಾಲೆ ಅನ್ನುವ ಪ್ರೀತಿ ಎಲ್ಲರಿಗೂ ಇರಬೇಕು ಎಂದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕರಾದ ಸಿದ್ಧಲಿಂಗ ಸ್ವಾಮಿ ರವರು ಶಿಕ್ಷಕರ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸೀತಾ ಆರ್ ಶೇಟ್ ರವರು ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪೋಷಕರ ಹಾಗೂ ಸಮುದಾಯದ ಪಾತ್ರದ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಶಾಲಾ ಸ್ಥಳದಾನಿಗಳಾದ ಪಾಂಡುರಂಗ ಮರಾಠೆ, ಎಸ್ ಡಿ ಎಮ್ ಸಿ ಅಧ್ಯಕ್ಷೆ ಶ್ರೀಮತಿ ಸವಿತಾ, ಮಾಜಿ ಅಧ್ಯಕ್ಷರಾದ ರಮಾನಂದ ಶರ್ಮಾ, ಪಂಚಾಯತ್ ಸದಸ್ಯೆ ವಿನುತಾ, ಪೋಷಕರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya
error: Content is protected !!