September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ರಸ್ತೆ ಪಕ್ಕದ ಶ್ರೀ ಮಂಜುನಾಥ ಕೃಪ ಕಟ್ಟಡದಲ್ಲಿ ನೂತನವಾಗಿ ಪ್ರಶ್ವಿನ್ ಪ್ರಿಂಟರ್ಸ್ ಜೂ.19 ರಂದು ಶುಭಾರಂಭಗೊಂಡಿದೆ.


ನಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಎಮ್. ಕಚೇರಿಯನ್ನು ಉದ್ಘಾಟಿಸಿದರು.
ನ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ ಪಿ. ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಸಣ್ಣ ವಯಸ್ಸಿನಲ್ಲಿ ಸುನೀಲ್ ಕುಮಾರ್ ಕೆ. ಪ್ರಶ್ವಿನ್ ಪ್ರಿಂಟರ್ಸ್ ಸಂಸ್ಥೆಯನ್ನು ತೆರೆಯುವ ಮೂಲಕ ಜನರಲ್ಲಿ ವಿಶ್ವಾಸಾರ್ಹ ವ್ಯಕ್ತಿಯಾಗಿ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಜೊತೆಗೆ ಸಂಸ್ಥೆ ಅಭಿವೃದ್ಧಿ ಹೊಂದಲಿ ಎಂದು ಹೇಳಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ಬ್ಯಾಂಕ್ ಸ್ಥಾಪಕರಾದ ಲ| ವಿ.ಆರ್.ನಾಯಕ್, ವಾಣಿ ಶಿಕ್ಷಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಿ ನಾರಾಯಣ, ಬೆಳ್ತಂಗಡಿ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ರಾವ್, ದಿನು ಪ್ಯಾಶನ್ ಮಾಲೀಕರಾದ ದಿನೇಶ್, ನಿವೃತ್ತ ಸೈನಿಕ ದಿನೇಶ್ ಗೌಡ ಕೆ, ಕಳಿಯ ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಕೆ. ಕಳಿಯ ಸಿ.ಎ. ಬ್ಯಾಂಕ್ ಮಾಜಿ ಉಪಾಧ್ಯಕ್ಷ ರಾಜೀವ ಗೌಡ ಕೆ., ರಕ್ತೇಶ್ವರಿಪದವು ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ. ದಂಪತಿಗಳು, ಸಂಸ್ಥೆಯ ಮಾಲೀಕರ ತಾಯಿ ಶ್ರೀಮತಿ ಸೇಸಮ್ಮ ಹಾಗೂ ಕುಟುಂಬಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಸಂಸ್ಥೆಯಲ್ಲಿ ಜೆರಾಕ್ಸ್, ಆನ್ಲೈನ್, ಸರಕಾರಿ ಇಲಾಖೆ ಸಂಬಂಧಿಸಿದ ಎಲ್ಲಾ ಅರ್ಜಿ ಫಾರಂಗಳು ಕ್ಲಪ್ತ ಸಮಯದಲ್ಲಿ ಮಿತದರದಲ್ಲಿ ದೊರೆಯುತ್ತದೆ. ಗ್ರಾಹಕರು ಸಹಕರಿಸಿಬೇಕೆಂದು ಸಂಸ್ಥೆಯ ಪಾಲುದಾರರಾದ ಸುನೀಲ್ ಕುಮಾರ್ ಕೆ. ಹಾಗೂ ಸಹೋದರಿ ಪಾವನ ಪ್ರವೀಣ್ ಗೌಡ ಹೇಳಿದರು.


ಕಳಿಯ ಸಿ.ಎ. ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಕೆ. ಸ್ವಾಗತಿಸಿ, ವಂದಿಸಿದರು.

Related posts

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!