July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಜೂ.16ರಂದು ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರುಗಳನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ. 11,730 ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya
error: Content is protected !!