23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಜೂ.16ರಂದು ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರುಗಳನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ. 11,730 ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related posts

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!