September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಜೂ.16ರಂದು ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರುಗಳನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ. 11,730 ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!