ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

ಉಜಿರೆ : ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇ 30ರಂದು ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ.


ಘಟನೆ ವಿವರ ಉಜಿರೆಯಲ್ಲಿ ವಾಸ್ತವ್ಯದಲ್ಲಿರುವ ವಿದ್ಯಾರ್ಥಿ ದಿವ್ಯಾ ಎಸ್ , ದೇವಾಂಗ ರಸ್ತೆ, ಕಸಬಾ ಹೋಬಳಿ, ಬೇಲೂರು ಕಸಬಾ, ಬೇಲೂರು ತಾಲೂಕು, ಹಾಸನ ಜಿಲ್ಲೆ ಎಂಬವರು ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ಕಾಣೆಯಾದ ದೂರು ದಾಖಲಾದ ಕೂಡಲೆ ಕಾರ್ಯಪ್ರವೃತರಾದ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಾಪೂರ್ ಮಠ್ ಅವರ ನೇತೃತ್ವದ ಸಿಬ್ಬಂದಿ ಚರಣ್ ರಾಜ್ ಮತ್ತು ಬಸವರಾಜ್ ಅವರು ವಿದ್ಯಾರ್ಥಿನಿ ಹೈದರಾಬಾದ್‌ನ, ನಿಜಮಾಬಾದ್ ನ ಸಂಬಂಧಿಕರ ಮನೆಯಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಜೂ.18 ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಕರೆದುಕೊಂಡು ಬಂದು ಪೋಷಕರಿಗೆ ಒಪ್ಪಿಸಿದ್ದಾರೆ. ದೂರದ ಕಾಲೇಜಿಗೆ ಮನೆಯವರು ಸೇರಿಸಿದ್ದರಿಂದ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದೆ ಯಾರಿಗೂ ತಿಳಿಸದೆ ಹೈದರಾಬಾದ್‌ನ ಸಂಬಂಧಿಕರ ಮನೆಗೆ ಹೋಗಿರುವುದಾಗಿ ಪೊಲೀಸರಿಗೆ ವಿದ್ಯಾರ್ಥಿನಿ ತಿಳಿಸಿದ್ದಾಳೆ.

Related posts

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!