30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯವನ್ನು ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿಚಾರಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆಗೆ ಚಂದು ರವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ದಸಂಸ ಮುಖಂಡರು ಹಾಗೂ ಕುಟುಂಬದ ಸದಸ್ಯರ ಜೊತೆಗೆ ಮಾತುಕತೆ ನಡೆಸಿ , ಧೈರ್ಯ ತುಂಬಿದರು. ಕಾಂಗ್ರೆಸ್ ಪಕ್ಷ ಚಂದುರವರ ಇಡೀ ಕುಟುಂಬದ ಜೊತೆಗೆ ಯಾವಾಗಲೂ ಇರುತ್ತದೆ. ಯಾವುದೇ ಕಾರಣಕ್ಕೂ ಎದೆಗುಂದದಿರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಸಂಸ (ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂಘಟನಾ ಸಂಚಾಲಕ ವಸಂತ ಬಿ.ಕೆ , ಜಿಲ್ಲಾ ಸಂಘಟನಾ ಸಂಚಾಲಕ ವೆಂಕಣ್ಣ ಕೊಯ್ಯೂರು , ದಸಂಸ ಹಿರಿಯ ಮುಖಂಡ ಸಂಜೀವ ಆರ್ , ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಬೇಬಿ ಸುವರ್ಣ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ ಸೇರಿದಂತೆ ಚಂದುರವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕಲ್ಮಂಜ ಲಕ್ಷ್ಮಣ ಭಂಡಾರಿ ನಿಧನ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya
error: Content is protected !!