22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯವನ್ನು ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿಚಾರಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆಗೆ ಚಂದು ರವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ದಸಂಸ ಮುಖಂಡರು ಹಾಗೂ ಕುಟುಂಬದ ಸದಸ್ಯರ ಜೊತೆಗೆ ಮಾತುಕತೆ ನಡೆಸಿ , ಧೈರ್ಯ ತುಂಬಿದರು. ಕಾಂಗ್ರೆಸ್ ಪಕ್ಷ ಚಂದುರವರ ಇಡೀ ಕುಟುಂಬದ ಜೊತೆಗೆ ಯಾವಾಗಲೂ ಇರುತ್ತದೆ. ಯಾವುದೇ ಕಾರಣಕ್ಕೂ ಎದೆಗುಂದದಿರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಸಂಸ (ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂಘಟನಾ ಸಂಚಾಲಕ ವಸಂತ ಬಿ.ಕೆ , ಜಿಲ್ಲಾ ಸಂಘಟನಾ ಸಂಚಾಲಕ ವೆಂಕಣ್ಣ ಕೊಯ್ಯೂರು , ದಸಂಸ ಹಿರಿಯ ಮುಖಂಡ ಸಂಜೀವ ಆರ್ , ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಬೇಬಿ ಸುವರ್ಣ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ ಸೇರಿದಂತೆ ಚಂದುರವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya
error: Content is protected !!