24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯವನ್ನು ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿಚಾರಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆಗೆ ಚಂದು ರವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ದಸಂಸ ಮುಖಂಡರು ಹಾಗೂ ಕುಟುಂಬದ ಸದಸ್ಯರ ಜೊತೆಗೆ ಮಾತುಕತೆ ನಡೆಸಿ , ಧೈರ್ಯ ತುಂಬಿದರು. ಕಾಂಗ್ರೆಸ್ ಪಕ್ಷ ಚಂದುರವರ ಇಡೀ ಕುಟುಂಬದ ಜೊತೆಗೆ ಯಾವಾಗಲೂ ಇರುತ್ತದೆ. ಯಾವುದೇ ಕಾರಣಕ್ಕೂ ಎದೆಗುಂದದಿರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಸಂಸ (ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂಘಟನಾ ಸಂಚಾಲಕ ವಸಂತ ಬಿ.ಕೆ , ಜಿಲ್ಲಾ ಸಂಘಟನಾ ಸಂಚಾಲಕ ವೆಂಕಣ್ಣ ಕೊಯ್ಯೂರು , ದಸಂಸ ಹಿರಿಯ ಮುಖಂಡ ಸಂಜೀವ ಆರ್ , ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಬೇಬಿ ಸುವರ್ಣ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ ಸೇರಿದಂತೆ ಚಂದುರವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!