23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕೊಯ್ಯೂರು : ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಆನಂದ ಡಿ. ಯವರು, ದೀಪ ಪ್ರಜ್ವಲನದೊoದಿಗೆ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತಮ್ಮ ಬದ್ಧತೆಯ ಬಗ್ಗೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮೋಹನ ಗೌಡ ವಹಿಸಿಕೊಂಡಿದ್ದರು.

ಕಾರ್ಯಕ್ರಮ ಸಂಘಟಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.


ವಿದ್ಯಾರ್ಥಿಗಳಾದ ಭವ್ಯ, ಪ್ರಜ್ಞಾ, ನಿಶ್ಮಿತಾ ಪ್ರಾರ್ಥನೆ ಗೈದರು. ಕುಮಾರಿ ಭವ್ಯ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಕೃತಿಕ್ ವಂದಿಸಿದರು. ಕು| ರಂಝಿನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶ್ರೀಮತಿ ಭವ್ಯ, ಲಕ್ಷ್ಮಣ ಗೌಡ, ಶ್ರೀಮತಿ ಪ್ರೀತಿ, ಸಂತೋಷ್ ಸಹಕರಿಸಿದರು.

Related posts

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!