27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕೊಯ್ಯೂರು : ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಆನಂದ ಡಿ. ಯವರು, ದೀಪ ಪ್ರಜ್ವಲನದೊoದಿಗೆ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತಮ್ಮ ಬದ್ಧತೆಯ ಬಗ್ಗೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮೋಹನ ಗೌಡ ವಹಿಸಿಕೊಂಡಿದ್ದರು.

ಕಾರ್ಯಕ್ರಮ ಸಂಘಟಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.


ವಿದ್ಯಾರ್ಥಿಗಳಾದ ಭವ್ಯ, ಪ್ರಜ್ಞಾ, ನಿಶ್ಮಿತಾ ಪ್ರಾರ್ಥನೆ ಗೈದರು. ಕುಮಾರಿ ಭವ್ಯ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಕೃತಿಕ್ ವಂದಿಸಿದರು. ಕು| ರಂಝಿನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶ್ರೀಮತಿ ಭವ್ಯ, ಲಕ್ಷ್ಮಣ ಗೌಡ, ಶ್ರೀಮತಿ ಪ್ರೀತಿ, ಸಂತೋಷ್ ಸಹಕರಿಸಿದರು.

Related posts

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!