25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕೊಯ್ಯೂರು : ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಆನಂದ ಡಿ. ಯವರು, ದೀಪ ಪ್ರಜ್ವಲನದೊoದಿಗೆ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತಮ್ಮ ಬದ್ಧತೆಯ ಬಗ್ಗೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮೋಹನ ಗೌಡ ವಹಿಸಿಕೊಂಡಿದ್ದರು.

ಕಾರ್ಯಕ್ರಮ ಸಂಘಟಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.


ವಿದ್ಯಾರ್ಥಿಗಳಾದ ಭವ್ಯ, ಪ್ರಜ್ಞಾ, ನಿಶ್ಮಿತಾ ಪ್ರಾರ್ಥನೆ ಗೈದರು. ಕುಮಾರಿ ಭವ್ಯ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಕೃತಿಕ್ ವಂದಿಸಿದರು. ಕು| ರಂಝಿನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶ್ರೀಮತಿ ಭವ್ಯ, ಲಕ್ಷ್ಮಣ ಗೌಡ, ಶ್ರೀಮತಿ ಪ್ರೀತಿ, ಸಂತೋಷ್ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya
error: Content is protected !!