22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

ಗುರಿಪಳ್ಳ: ಸರಕಾರಿ ಉನ್ನತೀಕರಿಸಿದ ಹಿ.ಪ್ರ‌.ಶಾಲೆ ಗುರಿಪಳ್ಳದಲ್ಲಿ ಶಾಲಾ ಮಕ್ಕಳ ಪೋಷಕರಿಗಾಗಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿಶೇಷ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿ ವಹಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ರಾಷ್ಟ್ರಪ್ರಶಸ್ತಿ ವಿಜೇತ ಮುಖ್ಯಶಿಕ್ಷಕ ಎಡ್ವರ್ಡ್ ಡಿಸೋಜ ರವರು ಮಾತನಾಡಿ ಸರಕಾರಿ ಶಾಲೆ ನಮಗೆ ಯಾಕೆ ಬೇಕು ಯಾವ ರೀತಿಯಾಗಿ ಸರಕಾರಿ ಶಾಲೆಯನ್ನು ಉಳಿಸಬಹುದು ಎಂಬ ವಿಚಾರದಲ್ಲಿ ಅಧ್ಬುತವಾಗಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಗುರುವಾಯನಕೆರೆ ಕ್ಲಸ್ಟರ್ ಸಿಆರ್ ಪಿ ರಾಜೇಶ್ ರವರು ಮಾತನಾಡಿ ಶಾಲೆ ಬೆಳೆಯಬೇಕಾದರೆ ಊರವರು ಹಾಗೂ ಇಲಾಖೆ ಜೊತೆಗೂಡಿ ಕೆಲಸ ಮಾಡಬೇಕು ಇದು ನಮ್ಮ ಶಾಲೆ ಅನ್ನುವ ಪ್ರೀತಿ ಎಲ್ಲರಿಗೂ ಇರಬೇಕು ಎಂದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕರಾದ ಸಿದ್ಧಲಿಂಗ ಸ್ವಾಮಿ ರವರು ಶಿಕ್ಷಕರ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸೀತಾ ಆರ್ ಶೇಟ್ ರವರು ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪೋಷಕರ ಹಾಗೂ ಸಮುದಾಯದ ಪಾತ್ರದ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಶಾಲಾ ಸ್ಥಳದಾನಿಗಳಾದ ಪಾಂಡುರಂಗ ಮರಾಠೆ, ಎಸ್ ಡಿ ಎಮ್ ಸಿ ಅಧ್ಯಕ್ಷೆ ಶ್ರೀಮತಿ ಸವಿತಾ, ಮಾಜಿ ಅಧ್ಯಕ್ಷರಾದ ರಮಾನಂದ ಶರ್ಮಾ, ಪಂಚಾಯತ್ ಸದಸ್ಯೆ ವಿನುತಾ, ಪೋಷಕರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!