23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ರಸ್ತೆ ಪಕ್ಕದ ಶ್ರೀ ಮಂಜುನಾಥ ಕೃಪ ಕಟ್ಟಡದಲ್ಲಿ ನೂತನವಾಗಿ ಪ್ರಶ್ವಿನ್ ಪ್ರಿಂಟರ್ಸ್ ಜೂ.19 ರಂದು ಶುಭಾರಂಭಗೊಂಡಿದೆ.


ನಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಎಮ್. ಕಚೇರಿಯನ್ನು ಉದ್ಘಾಟಿಸಿದರು.
ನ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ ಪಿ. ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಸಣ್ಣ ವಯಸ್ಸಿನಲ್ಲಿ ಸುನೀಲ್ ಕುಮಾರ್ ಕೆ. ಪ್ರಶ್ವಿನ್ ಪ್ರಿಂಟರ್ಸ್ ಸಂಸ್ಥೆಯನ್ನು ತೆರೆಯುವ ಮೂಲಕ ಜನರಲ್ಲಿ ವಿಶ್ವಾಸಾರ್ಹ ವ್ಯಕ್ತಿಯಾಗಿ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಜೊತೆಗೆ ಸಂಸ್ಥೆ ಅಭಿವೃದ್ಧಿ ಹೊಂದಲಿ ಎಂದು ಹೇಳಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ಬ್ಯಾಂಕ್ ಸ್ಥಾಪಕರಾದ ಲ| ವಿ.ಆರ್.ನಾಯಕ್, ವಾಣಿ ಶಿಕ್ಷಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಿ ನಾರಾಯಣ, ಬೆಳ್ತಂಗಡಿ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ರಾವ್, ದಿನು ಪ್ಯಾಶನ್ ಮಾಲೀಕರಾದ ದಿನೇಶ್, ನಿವೃತ್ತ ಸೈನಿಕ ದಿನೇಶ್ ಗೌಡ ಕೆ, ಕಳಿಯ ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಕೆ. ಕಳಿಯ ಸಿ.ಎ. ಬ್ಯಾಂಕ್ ಮಾಜಿ ಉಪಾಧ್ಯಕ್ಷ ರಾಜೀವ ಗೌಡ ಕೆ., ರಕ್ತೇಶ್ವರಿಪದವು ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ. ದಂಪತಿಗಳು, ಸಂಸ್ಥೆಯ ಮಾಲೀಕರ ತಾಯಿ ಶ್ರೀಮತಿ ಸೇಸಮ್ಮ ಹಾಗೂ ಕುಟುಂಬಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಸಂಸ್ಥೆಯಲ್ಲಿ ಜೆರಾಕ್ಸ್, ಆನ್ಲೈನ್, ಸರಕಾರಿ ಇಲಾಖೆ ಸಂಬಂಧಿಸಿದ ಎಲ್ಲಾ ಅರ್ಜಿ ಫಾರಂಗಳು ಕ್ಲಪ್ತ ಸಮಯದಲ್ಲಿ ಮಿತದರದಲ್ಲಿ ದೊರೆಯುತ್ತದೆ. ಗ್ರಾಹಕರು ಸಹಕರಿಸಿಬೇಕೆಂದು ಸಂಸ್ಥೆಯ ಪಾಲುದಾರರಾದ ಸುನೀಲ್ ಕುಮಾರ್ ಕೆ. ಹಾಗೂ ಸಹೋದರಿ ಪಾವನ ಪ್ರವೀಣ್ ಗೌಡ ಹೇಳಿದರು.


ಕಳಿಯ ಸಿ.ಎ. ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಕೆ. ಸ್ವಾಗತಿಸಿ, ವಂದಿಸಿದರು.

Related posts

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!