26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಜೂ.16ರಂದು ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರುಗಳನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ. 11,730 ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!