31.3 C
ಪುತ್ತೂರು, ಬೆಳ್ತಂಗಡಿ
May 15, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

ಉಜಿರೆ : “ನಾಯಕನಾದವನು ಸ್ವತಃ ತಾನು ನೀತಿ ನಿಯಮಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಮ್ಮ ಅಭಿರುಚಿಯನ್ನು ತಿಳಿದು, ಆ ಕ್ಷೇತ್ರವನ್ನು ಆರಿಸಿಕೊಳ್ಳಿ” ಎಂದು ಅಡ್ವೋಕೇಟ್ ಬಾರ್ ಕೌನ್ಸಿಲ್ ಬೆಳ್ತಂಗಡಿಯ ಕಾನೂನು ಸಲಹೆಗಾರರಾದ ಧನಂಜಯ್ ರಾವ್ ಹೇಳಿದರು.

ಇವರು ಶ್ರೀ.ಧಂ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ19 ರಂದು ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಮತ್ತು ಹಳೆ ವಿದ್ಯಾರ್ಥಿ ಹಾಗೂ ಶಾಲಾ ನಾಯಕನಾಗಿದ್ದ ಸಾತ್ವಿಕ್ ರಾವ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಾಥ್ವಿಕ ಮತ್ತು ಜ್ಞಾನ್ದೀಪ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿ ವರ್ಷ ವಂದಿಸಿದರು.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya
error: Content is protected !!