ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಉಜಿರೆ : “ನಾಯಕನಾದವನು ಸ್ವತಃ ತಾನು ನೀತಿ ನಿಯಮಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಮ್ಮ ಅಭಿರುಚಿಯನ್ನು ತಿಳಿದು, ಆ ಕ್ಷೇತ್ರವನ್ನು ಆರಿಸಿಕೊಳ್ಳಿ” ಎಂದು ಅಡ್ವೋಕೇಟ್ ಬಾರ್ ಕೌನ್ಸಿಲ್ ಬೆಳ್ತಂಗಡಿಯ ಕಾನೂನು ಸಲಹೆಗಾರರಾದ ಧನಂಜಯ್ ರಾವ್ ಹೇಳಿದರು.

ಇವರು ಶ್ರೀ.ಧಂ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ19 ರಂದು ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಮತ್ತು ಹಳೆ ವಿದ್ಯಾರ್ಥಿ ಹಾಗೂ ಶಾಲಾ ನಾಯಕನಾಗಿದ್ದ ಸಾತ್ವಿಕ್ ರಾವ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಾಥ್ವಿಕ ಮತ್ತು ಜ್ಞಾನ್ದೀಪ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿ ವರ್ಷ ವಂದಿಸಿದರು.

Leave a Comment

error: Content is protected !!