28.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯವನ್ನು ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿಚಾರಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆಗೆ ಚಂದು ರವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ದಸಂಸ ಮುಖಂಡರು ಹಾಗೂ ಕುಟುಂಬದ ಸದಸ್ಯರ ಜೊತೆಗೆ ಮಾತುಕತೆ ನಡೆಸಿ , ಧೈರ್ಯ ತುಂಬಿದರು. ಕಾಂಗ್ರೆಸ್ ಪಕ್ಷ ಚಂದುರವರ ಇಡೀ ಕುಟುಂಬದ ಜೊತೆಗೆ ಯಾವಾಗಲೂ ಇರುತ್ತದೆ. ಯಾವುದೇ ಕಾರಣಕ್ಕೂ ಎದೆಗುಂದದಿರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಸಂಸ (ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂಘಟನಾ ಸಂಚಾಲಕ ವಸಂತ ಬಿ.ಕೆ , ಜಿಲ್ಲಾ ಸಂಘಟನಾ ಸಂಚಾಲಕ ವೆಂಕಣ್ಣ ಕೊಯ್ಯೂರು , ದಸಂಸ ಹಿರಿಯ ಮುಖಂಡ ಸಂಜೀವ ಆರ್ , ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಬೇಬಿ ಸುವರ್ಣ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ ಸೇರಿದಂತೆ ಚಂದುರವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!