September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯವನ್ನು ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿಚಾರಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆಗೆ ಚಂದು ರವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ದಸಂಸ ಮುಖಂಡರು ಹಾಗೂ ಕುಟುಂಬದ ಸದಸ್ಯರ ಜೊತೆಗೆ ಮಾತುಕತೆ ನಡೆಸಿ , ಧೈರ್ಯ ತುಂಬಿದರು. ಕಾಂಗ್ರೆಸ್ ಪಕ್ಷ ಚಂದುರವರ ಇಡೀ ಕುಟುಂಬದ ಜೊತೆಗೆ ಯಾವಾಗಲೂ ಇರುತ್ತದೆ. ಯಾವುದೇ ಕಾರಣಕ್ಕೂ ಎದೆಗುಂದದಿರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಸಂಸ (ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂಘಟನಾ ಸಂಚಾಲಕ ವಸಂತ ಬಿ.ಕೆ , ಜಿಲ್ಲಾ ಸಂಘಟನಾ ಸಂಚಾಲಕ ವೆಂಕಣ್ಣ ಕೊಯ್ಯೂರು , ದಸಂಸ ಹಿರಿಯ ಮುಖಂಡ ಸಂಜೀವ ಆರ್ , ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಬೇಬಿ ಸುವರ್ಣ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ ಸೇರಿದಂತೆ ಚಂದುರವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya
error: Content is protected !!