23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕೊಯ್ಯೂರು : ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಆನಂದ ಡಿ. ಯವರು, ದೀಪ ಪ್ರಜ್ವಲನದೊoದಿಗೆ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತಮ್ಮ ಬದ್ಧತೆಯ ಬಗ್ಗೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮೋಹನ ಗೌಡ ವಹಿಸಿಕೊಂಡಿದ್ದರು.

ಕಾರ್ಯಕ್ರಮ ಸಂಘಟಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.


ವಿದ್ಯಾರ್ಥಿಗಳಾದ ಭವ್ಯ, ಪ್ರಜ್ಞಾ, ನಿಶ್ಮಿತಾ ಪ್ರಾರ್ಥನೆ ಗೈದರು. ಕುಮಾರಿ ಭವ್ಯ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಕೃತಿಕ್ ವಂದಿಸಿದರು. ಕು| ರಂಝಿನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶ್ರೀಮತಿ ಭವ್ಯ, ಲಕ್ಷ್ಮಣ ಗೌಡ, ಶ್ರೀಮತಿ ಪ್ರೀತಿ, ಸಂತೋಷ್ ಸಹಕರಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya
error: Content is protected !!