22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಖುಷಿ. ಹೆಚ್, ಮೈಸೂರು ಆಯ್ಕೆಯಾಗಿದ್ದಾರೆ. ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ.

ಜೂ.21 ರಂದು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, ಅಮೃತ ವರ್ಷಿಣಿ ಸಭಾ ಭವನದಲ್ಲಿ ನಡೆಯುವ ಸಂದರ್ಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ. ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪ್ರ ಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!