July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜೂ. 15 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.


ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ. ಆಲ್ವಿನ್ ಸೆರಾವೋ ” ನಾಯಕತ್ವ ಎಂದರೆ ಜವಾಬ್ದಾರಿ, ಎಲ್ಲರೊಂದಿಗೆ ಸೇರಿ ಜವಾಬ್ಧಾರಿಯನ್ನು ನಿರ್ವಹಿಸುವುದು ಸವಾಲಿನ ಕೆಲಸ. ನಾಯಕನಾದವನಿಗೆ ನಾಯಕತ್ವದ ಅರಿವಿರಬೇಕು ಎಂದರು.

ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ರಿಚರ್ಡ್ ಮೋರಸ್, ವಿದ್ಯಾರ್ಥಿ ಸಂಘದ ಸಂಯೋಜಕಿ ಶ್ರೀಮತಿ ಜ್ಯೋತಿ ಹೆಗ್ಡೆ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ನಾಯಕನಾಗಿ ಆಯ್ಕೆಯಾದ ಕು.ಜಿತೇಶ್, ಉಪನಾಯಕಿ ಅಶ್ಮಿ ಸಜಿ, ಕಾರ್ಯದರ್ಶಿ ರಿಯಾನ ಡಿ’ಸೋಜ ಹಾಗೂ ವಿವಿಧ ಸಂಘದ ಪದಾಧಿಕಾರಿಗಳಿಗೆ ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶ್ರೀಮತಿ ಜ್ಯೋತಿ ಹೆಗ್ಡೆ ಸ್ವಾಗತಿಸಿ, ಸಂತೋಷ್ ಸಲ್ಡಾನ ವಂದಿಸಿದರು ಹಾಗೂ ಹಿಂದಿ ಭಾಷಾ ಉಪನ್ಯಾಸಕಿ ಶ್ರೀಮತಿ ಛಾಯಾ ತುಳುಪುಳೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!