23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಜೂ.16ರಂದು ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರುಗಳನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ. 11,730 ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya
error: Content is protected !!