July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ರಸ್ತೆ ಪಕ್ಕದ ಶ್ರೀ ಮಂಜುನಾಥ ಕೃಪ ಕಟ್ಟಡದಲ್ಲಿ ನೂತನವಾಗಿ ಪ್ರಶ್ವಿನ್ ಪ್ರಿಂಟರ್ಸ್ ಜೂ.19 ರಂದು ಶುಭಾರಂಭಗೊಂಡಿದೆ.


ನಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಎಮ್. ಕಚೇರಿಯನ್ನು ಉದ್ಘಾಟಿಸಿದರು.
ನ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ ಪಿ. ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಸಣ್ಣ ವಯಸ್ಸಿನಲ್ಲಿ ಸುನೀಲ್ ಕುಮಾರ್ ಕೆ. ಪ್ರಶ್ವಿನ್ ಪ್ರಿಂಟರ್ಸ್ ಸಂಸ್ಥೆಯನ್ನು ತೆರೆಯುವ ಮೂಲಕ ಜನರಲ್ಲಿ ವಿಶ್ವಾಸಾರ್ಹ ವ್ಯಕ್ತಿಯಾಗಿ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಜೊತೆಗೆ ಸಂಸ್ಥೆ ಅಭಿವೃದ್ಧಿ ಹೊಂದಲಿ ಎಂದು ಹೇಳಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ಬ್ಯಾಂಕ್ ಸ್ಥಾಪಕರಾದ ಲ| ವಿ.ಆರ್.ನಾಯಕ್, ವಾಣಿ ಶಿಕ್ಷಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಿ ನಾರಾಯಣ, ಬೆಳ್ತಂಗಡಿ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ರಾವ್, ದಿನು ಪ್ಯಾಶನ್ ಮಾಲೀಕರಾದ ದಿನೇಶ್, ನಿವೃತ್ತ ಸೈನಿಕ ದಿನೇಶ್ ಗೌಡ ಕೆ, ಕಳಿಯ ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಕೆ. ಕಳಿಯ ಸಿ.ಎ. ಬ್ಯಾಂಕ್ ಮಾಜಿ ಉಪಾಧ್ಯಕ್ಷ ರಾಜೀವ ಗೌಡ ಕೆ., ರಕ್ತೇಶ್ವರಿಪದವು ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ. ದಂಪತಿಗಳು, ಸಂಸ್ಥೆಯ ಮಾಲೀಕರ ತಾಯಿ ಶ್ರೀಮತಿ ಸೇಸಮ್ಮ ಹಾಗೂ ಕುಟುಂಬಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಸಂಸ್ಥೆಯಲ್ಲಿ ಜೆರಾಕ್ಸ್, ಆನ್ಲೈನ್, ಸರಕಾರಿ ಇಲಾಖೆ ಸಂಬಂಧಿಸಿದ ಎಲ್ಲಾ ಅರ್ಜಿ ಫಾರಂಗಳು ಕ್ಲಪ್ತ ಸಮಯದಲ್ಲಿ ಮಿತದರದಲ್ಲಿ ದೊರೆಯುತ್ತದೆ. ಗ್ರಾಹಕರು ಸಹಕರಿಸಿಬೇಕೆಂದು ಸಂಸ್ಥೆಯ ಪಾಲುದಾರರಾದ ಸುನೀಲ್ ಕುಮಾರ್ ಕೆ. ಹಾಗೂ ಸಹೋದರಿ ಪಾವನ ಪ್ರವೀಣ್ ಗೌಡ ಹೇಳಿದರು.


ಕಳಿಯ ಸಿ.ಎ. ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಕೆ. ಸ್ವಾಗತಿಸಿ, ವಂದಿಸಿದರು.

Related posts

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya
error: Content is protected !!