ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡಬಿದಿರೆ ಸ್ಕೌಟ್- ಗೈಡ್ ಕನ್ನಡ ಭವನದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕಗಳಿಸಿದ ರೋವರ್‍ಸ್ ಹಾಗೂ ರೇಂಜರ್‍ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ವಾಣಿ ಪದವಿ ಪೂರ್ವ ಕಾಲೇಜಿನ ರೋವರ್‍ಸ್ ವಿದ್ಯಾರ್ಥಿಗಳಾದ ದೀಪಕ್, ಚರಣ್ ಹಾಗೂ ರೇಂಜರ್‍ಸ್ ವಿದ್ಯಾರ್ಥಿಗಳಾದ ಅರ್ಪಿತಾ ಹೆಚ್ ಶೆಟ್ಟಿ, ಅಶ್ವಿತಾ ಹೆಚ್ ಶೆಟ್ಟಿ, ಕಾವ್ಯಶ್ರೀ, ಅನನ್ಯ, ನೀಶಾ, ಶ್ರೇಜಾ ಭಾಗವಹಿಸಿ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ರಾಜ್ಯಮಟ್ಟದ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಯದುಪತಿ ಗೌಡ ಅವರು ಅಭಿನಂದಿಸಿದರು.

Leave a Comment

error: Content is protected !!