23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್ ಚಾರಣಕ್ಕೆ ಹೆಚ್ಚಿನ ಚಾರಣಿಗರ ಒತ್ತಡ ಇರುವುದರಿಂದ, ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ.

ಚಾರಣಕ್ಕೆ (www.kudremukhanationalpark.in) ಮುಖಾಂತರ ಬುಕಿಂಗ್ ಮಾಡಬೇಕು, ಒಬ್ಬರು ಗರಿಷ್ಠ ಮೂರು ಜನರಿಗೆ ಬುಕಿಂಗ್ ಮಾಡಬಹುದು. ಎಲ್ಲ ಚಾರಣಿಗರು ಆನ್‌ಲೈನ್ ಮೂಲಕ ಮಾತ್ರ ಬುಕಿಂಗ್ ಮಾಡಬೇಕು. ಆಫ್‌ಲೈನ್ ಬುಕಿಂಗ್ ಅವಕಾಶ ಇಲ್ಲ. ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ ) 200 ಜನರಿಗೆ ಅವಕಾಶ ನೀಡಲಾಗುತ್ತದೆ. ವಾರಾಂತ್ಯಕ್ಕೆ ಸ್ಥಳೀಯ ಗ್ರಾಮಸ್ಥರಿಗೆ ಅವಕಾಶ ಲಭಿಸದ ಕಾರಣ ವಿಶೇಷವಾಗಿ ಅವಕಾಶ ನೀಡಲು 50 ಸ್ಥಳೀಯ ಗ್ರಾಮಸ್ಥರಿಗೆ ಪ್ರತ್ಯೇಕ ಆನ್‌ಲೈನ್ ಬುಕಿಂಗ್‌ ವ್ಯವಸ್ಥೆ ರೂಪಿಸಲಾಗಿದೆ.

ಕುದುರೆಮುಖ ಮತ್ತು ಬೆಳ್ತಂಗಡಿ ವಲಯ ಅರಣ್ಯ ಅಧಿಕಾರಿ ವನ್ಯಜೀವಿ ವಲಯ ಸಂಪರ್ಕಿಸಿ ಬುಕಿಂಗ್ ಲಾಗಿನ್ ಐಡಿ ಪಡೆದು ನೋಂದಾಯಿಸಿಕೊಳ್ಳಬಹುದು. 50 ಪ್ರವಾಸಿಗರಿಗೆ ತತ್ಕಾಲ್ ರೂಪದಲ್ಲಿ ವಾರಂತ್ಯಕ್ಕೆ ಮಾತ್ರ ಬುಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ತತ್ಕಾಲ್ ಬುಕಿಂಗ್ ವ್ಯವಸ್ಥೆಯನ್ನು ತಂತ್ರಾಂಶದಲ್ಲಿ ರೂಪಿಸಲಾಗಿದ್ದು ಕೊನೆ ಕ್ಷಣದಲ್ಲಿ ಚಾರಣಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಕುರಿತು ಪ್ರತಿ ಗುರುವಾರ ಮಧ್ಯಾಹ್ನ ಆನ್‌ಲೈನ್‌ನಲ್ಲಿ ಅವಕಾಶ ನೀಡಲಾಗಿದೆ. ಉಳಿದ ದಿನಗಳಿಗೆ 300 ಜನರಿಗೆ ಬುಕಿಂಗ್ ಅವಕಾಶ ನೀಡಲಾಗಿದೆ. ಚಾರಣ ಕುರಿತು ಪ್ರತಿ ತಿಂಗಳ 25ನೇ ತಾರೀಕಿನಂದು ಮುಂದಿನ 30 ದಿನಗಳಿಗೆ ಆನ್‌ಲೈನ್ ತಂತ್ರಾಂಶದಲ್ಲಿ ಬುಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ಜೂ. 25ರಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ.

ಸ್ಥಳಿಯ ಹೋಂ ಸ್ಟೇ ಮಾಲೀಕರು ಕುದುರೆಮುಖ ವನ್ಯಜೀವಿ ವಲಯ ಮತ್ತು ಬೆಳ್ತಂಗಡಿ ವಲಯ ಅರಣ್ಯ ಅಧಿಕಾರಿ ಇವರಲ್ಲಿ ಹೋಂ ಸ್ಟೇ ಕುರಿತ ದಾಖಲಾತಿಗಳನ್ನು ನೀಡಿ ಕಡ್ಡಾಯವಾಗಿ ಜೂನ್ ಅಂತ್ಯದ ಒಳಗೆ ನೋಂದಾಯಿಸಿಕೊಳ್ಳಬೇಕು ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya
error: Content is protected !!