ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜು. 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಶೀಘ್ರ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

ಇತ್ಯರ್ಥ ಪಡಿಸಿಕೊಳ್ಳಬಹುದಾದ ಪ್ರಕರಣ: ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಛೇದನ ಪ್ರಕರಣ ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್, ನೀರಿನ ಶುಲ್ಕಕ್ಕೆ ಸಂಬಂಧ ಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿತ, ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಬಹುದು ಎಂದು ತಿಳಿಸಲಾಗಿದೆ.

Leave a Comment

error: Content is protected !!