July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜು. 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಶೀಘ್ರ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

ಇತ್ಯರ್ಥ ಪಡಿಸಿಕೊಳ್ಳಬಹುದಾದ ಪ್ರಕರಣ: ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಛೇದನ ಪ್ರಕರಣ ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್, ನೀರಿನ ಶುಲ್ಕಕ್ಕೆ ಸಂಬಂಧ ಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿತ, ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಬಹುದು ಎಂದು ತಿಳಿಸಲಾಗಿದೆ.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ನೀಟ್ ಯುಜಿ (NEET-UG) ಮರು ಪರೀಕ್ಷೆಯ ದಿನಾಂಕ ನಿಗದಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya
error: Content is protected !!