28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಬೆಳ್ತಂಗಡಿ :ಅಳದಂಗಡಿ ತಿಮ್ಮಣ್ಣರಸರಾದ ಡಾ, ಪದ್ಮ ಪ್ರಸಾದ ಅಜಿಲರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಮಾತನಾಡಿ ನಾನಾ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬ ಆತಂಕದ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಯಂತ್ರ ಶ್ರೀ ಯೋಜನೆಯಿಂದ ರೈತರ ಉತ್ತೇಜನ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ ಭತ್ತ ಕೃಷಿ ಮಾಡುವ ರೈತರು ಕೂಲಿ ಕಾರ್ಮಿಕರ ಕೊರತೆಯಿಂದ ಕೃಷಿಯನ್ನು ಕೈ ಬಿಡುವ ಯೋಚನೆ ಮಾಡಬಾರದು ಯಂತ್ರೋಪಕರಣಗಳನ್ನು ಬಳಸಿ ಭತ್ತ ಕೃಷಿ ಮಾಡಬೇಕು, ಕೃಷಿ ಪೂರಕ ಚಟುವಟಿಕೆಗಳಿಗೆ ನೆರವಾಗುವುದು ಯೋಜನೆಯ ಉದ್ಧೇಶವಾಗಿದೆ ಎಂದು ಶುಭನುಡಿದರು.

ಸತ್ಯದೇವತೆ ದೇವಸ್ಥಾನ ಆಡಳಿತ ಮುಖ್ಯಸ್ಥರಾದ ಶಿವಪ್ರಸಾದ್ ಅಜಿಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯಂತ್ರಶ್ರೀ ನಾಟಿಗೆ ಸಸಿ ಮಡಿ ಹಸ್ತಾಂತರಿಸಿ ಶುಭನುಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಹರೀಶ್ ಮಡಿವಾಳ, ಹಾಗೂ ಹರೀಶ್ಆಚಾರ್ಯ, ಹಾಗೂ ಯಂತ್ರ ಬ್ಯಾಂಕ್ ಮ್ಯಾನೇಜರ್ ಉಮೇಶ್, ಅಳದಂಗಡಿ ವಲಯದ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಸಿ.ಹೆಚ್.ಎಸ್.ಸಿ ಮೆನೇಜರ್ ಸಚಿನ್, ಹಾಗೂ ಸಂತೋಷ, ಒಕ್ಕೂಟದ ಉಪಾಧ್ಯಕ್ಷರು ಸದಾನಂದ, ಯಂತ್ರಶ್ರೀ ಯೋಧ ಪ್ರಶಾಂತ್ ಚಿತ್ತಾರ, ಶ್ರೀನಿವಾಸ್, ಸೇವಾಪ್ರತಿನಿಧಿ ಶುಭಲತಾ ಹಾಗೂ ಪ್ರಗತಿ ಬಂಧು ತಂಡದ ರೈತರು ಮುಂತಾದವರು ಉಪಸಿತರಿದ್ದರು.

Related posts

ಅರಳಿ ಮಿತ್ರ ಮಹಿಳಾ ಮಂಡಳಿ ಮತ್ತು ಮಿತ್ರ ಯುವಕ ಮಂಡಲ ಜಂಟಿ ಆಶ್ರಯದಲ್ಲಿ ಕೇಸರ್ ದ ಗೊಬ್ಬು

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya
error: Content is protected !!