26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

ಕಣಿಯೂರು : “ಮಲ್ಲಿಗೆ ಕೃಷಿ ಲಾಭದಾಯಕ ಕೃಷಿ ತುಂಡು ಭೂಮಿಯಲ್ಲಿ, ಕಡಿಮೆ ಖರ್ಚಿನಲ್ಲಿ ರೈತ ಮಹಿಳೆಯರು ಮನೆ ಕೆಲಸ ಜೊತೆ ಮಾಡಬಹುದಾದ ಪುಷ್ಪ ಕೃಷಿಯಾಗಿದೆ ” ಎಂದು ಶ್ರೀ,ಕ್ಷೇ,ಧ,ಗ್ರಾ,ಯೋ, ಬಿಸಿ ಟ್ರಸ್ಟ್ ಗುರುವಾಯನಕೆರೆ ” ಯೋಜನಾಧಿಕಾರಿ ದಯಾನಂದ್ ರವರು ಹೇಳಿದರು.



ಅವರು ಶ್ರೀಮತಿ ಪ್ರಭಾವತಿಯವರ ಮನೆಯ ಹೊರಂಗನದಲ್ಲಿ ನಡೆದ ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ “ಮಲ್ಲಿಗೆ ಪ್ರಗತಿಪರ ಕೃಷಿಕ ಸುರೇಶ ಮಾತನಾಡಿ ಮಲ್ಲಿಗೆ ಕೃಷಿಗೆ ದಿನದ ಪೂರ್ತಿ ಬಿಸಿಲು ಹಾಗೂ ವಾತಾವರಣದಲ್ಲಿ ತೇವಾಂಶದಿಂದ ಕೂಡಿದ್ದ ವಾತಾವರಣ ಅನುಕೂಲವಾಗಿದೆ, ನೆರಳು ಇರುವ ಜಾಗದಲ್ಲಿ ಗಿಡ ಚೆನ್ನಾಗಿ ಬೆಳೆದರು ಹೂವಿನ ಇಳುವರಿ ಕಡಿಮೆ, ಮಲ್ಲಿಗೆಯನ್ನು ನೆಡಲು ಚೆನ್ನಾಗಿ ಬಿಸಿಲು ಬೀಳುವ ಹಾಗೂ ಮಳೆಗಾಲದಲ್ಲಿ ನೀರು ನಿಲ್ಲದ ಜಾಗವನ್ನು ಆಯ್ಕೆ ಮಾಡಿಕೊಳಬೇಕು, ಮರಳು ಮಿಶ್ರಿತ ಕೆಂಪು ಮಣ್ಣು ಈ ಬೆಳೆಗೆ ಸೂಕ್ತ ನಾಟಿಗೆ ಸೂಕ್ತವಾದ ವಾತಾವರಣ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳು, ಜೂನ್ ತಿಂಗಳಲ್ಲಿ ಅಧಿಕ ಮಳೆ ಬೀಳುವುದರಿಂದ ಗಿಡಕ್ಕೆ ಹಾನಿ ಯಾಗುವ ಸಾಧ್ಯತೆ ಜಾಸ್ತಿ ಇರುತ್ತದೆ ಹೊಂಡ ದಿಂದ ಹೊಂಡಕ್ಕೆ ಆರರಿಂದ ಎಂಟು ಅಡಿ ಅಂತರವಿರಬೇಕು ಚೆನ್ನಾಗಿ ಕೊಳೆತ ಹಟ್ಟಿಗೊಬ್ಬರ ಭೂಮಿಯ ಮೇಲ್ಮನ್ನಿನ ಜೊತೆ ಮಿಶ್ರಣ ಮಾಡಿ ಕಹಿಬೇವಿನ ಹಿಂಡಿಯನ್ ಸೇರಿಸಿ ಮಿಶ್ರಣ ಮಾಡಬೇಕು ಮಧ್ಯಭಾಗದಲ್ಲಿ ಹುಂಡಿ ಮಾಡಿ ಗಿಡ ನಾಟಿ ಹಚ್ಚಬೇಕು ಮಲ್ಲಿಗೆ ಗಿಡ ಚೆನ್ನಾಗಿ ಬೆಳೆಯಲು ಉತ್ತೇಜಿಸಬೇಕು ಕೊಡೆಯಾಕಾರದಲ್ಲಿ ಬೆಳೆಯುವಂತೆ ಮಾಡಬೇಕು ಏಕೆಂದರೆ ಕೊಡೆಯ ಆಕಾರದ ಗಿಡದ ಮೇಲೆ ಬಿಸಿಲು ವಂದೇ ರೀತಿಯಲ್ಲಿ ಸಮನಾಗಿ ಬೀಳುತ್ತದೆ ಇದರಿಂದ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯ ಎಂದು ಮಾಹಿತಿ ನೀಡಲಾಯಿತು,


ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ, ಒಕ್ಕೂಟದ ಅಧ್ಯಕ್ಷ ತಿಲಕ್, ಮೇಲ್ವಿಚಾರಕರು ಶಿವಾನಂದ್, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ರವರು ರೈತರಿಗೆ ಗಿಡ ವಿತರಣೆ ಮಾಡಲಾಯಿತು. ಸೇವಾಪ್ರತಿನಿಧಿ ಶ್ರೀಮತಿ ಪ್ರೇಮ, ತಂಗೆವ್ವ, ಸುಶೀಲಾ, ಯಾದವ್, ಮಾಲಿನಿ,ಗೀತಾ, ಅನುರಾಧ, ಕಸ್ತೂರಿ,ಜಾನಕಿ, ಮಂಜುಳ್, ಮುಂತಾದವರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
error: Content is protected !!