July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

ಮಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದೀ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದರೆ ಸೆಲೆಬ್ರೆಟಿಗಳು, ಗಣ್ಯವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

ಅಷ್ಟೇ ಅಲ್ಲದೇ ಶಾಲಾ ಸಂಸ್ಥೆಯಲ್ಲಿ ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಆಚರಿಸುವುದರಿಂದ ಕೆಲವು ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಎಂದು ಬೇಜಾರಾಗುತ್ತದೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Related posts

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

Suddi Udaya
error: Content is protected !!