September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್ ಚಾರಣಕ್ಕೆ ಹೆಚ್ಚಿನ ಚಾರಣಿಗರ ಒತ್ತಡ ಇರುವುದರಿಂದ, ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ.

ಚಾರಣಕ್ಕೆ (www.kudremukhanationalpark.in) ಮುಖಾಂತರ ಬುಕಿಂಗ್ ಮಾಡಬೇಕು, ಒಬ್ಬರು ಗರಿಷ್ಠ ಮೂರು ಜನರಿಗೆ ಬುಕಿಂಗ್ ಮಾಡಬಹುದು. ಎಲ್ಲ ಚಾರಣಿಗರು ಆನ್‌ಲೈನ್ ಮೂಲಕ ಮಾತ್ರ ಬುಕಿಂಗ್ ಮಾಡಬೇಕು. ಆಫ್‌ಲೈನ್ ಬುಕಿಂಗ್ ಅವಕಾಶ ಇಲ್ಲ. ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ ) 200 ಜನರಿಗೆ ಅವಕಾಶ ನೀಡಲಾಗುತ್ತದೆ. ವಾರಾಂತ್ಯಕ್ಕೆ ಸ್ಥಳೀಯ ಗ್ರಾಮಸ್ಥರಿಗೆ ಅವಕಾಶ ಲಭಿಸದ ಕಾರಣ ವಿಶೇಷವಾಗಿ ಅವಕಾಶ ನೀಡಲು 50 ಸ್ಥಳೀಯ ಗ್ರಾಮಸ್ಥರಿಗೆ ಪ್ರತ್ಯೇಕ ಆನ್‌ಲೈನ್ ಬುಕಿಂಗ್‌ ವ್ಯವಸ್ಥೆ ರೂಪಿಸಲಾಗಿದೆ.

ಕುದುರೆಮುಖ ಮತ್ತು ಬೆಳ್ತಂಗಡಿ ವಲಯ ಅರಣ್ಯ ಅಧಿಕಾರಿ ವನ್ಯಜೀವಿ ವಲಯ ಸಂಪರ್ಕಿಸಿ ಬುಕಿಂಗ್ ಲಾಗಿನ್ ಐಡಿ ಪಡೆದು ನೋಂದಾಯಿಸಿಕೊಳ್ಳಬಹುದು. 50 ಪ್ರವಾಸಿಗರಿಗೆ ತತ್ಕಾಲ್ ರೂಪದಲ್ಲಿ ವಾರಂತ್ಯಕ್ಕೆ ಮಾತ್ರ ಬುಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ತತ್ಕಾಲ್ ಬುಕಿಂಗ್ ವ್ಯವಸ್ಥೆಯನ್ನು ತಂತ್ರಾಂಶದಲ್ಲಿ ರೂಪಿಸಲಾಗಿದ್ದು ಕೊನೆ ಕ್ಷಣದಲ್ಲಿ ಚಾರಣಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಕುರಿತು ಪ್ರತಿ ಗುರುವಾರ ಮಧ್ಯಾಹ್ನ ಆನ್‌ಲೈನ್‌ನಲ್ಲಿ ಅವಕಾಶ ನೀಡಲಾಗಿದೆ. ಉಳಿದ ದಿನಗಳಿಗೆ 300 ಜನರಿಗೆ ಬುಕಿಂಗ್ ಅವಕಾಶ ನೀಡಲಾಗಿದೆ. ಚಾರಣ ಕುರಿತು ಪ್ರತಿ ತಿಂಗಳ 25ನೇ ತಾರೀಕಿನಂದು ಮುಂದಿನ 30 ದಿನಗಳಿಗೆ ಆನ್‌ಲೈನ್ ತಂತ್ರಾಂಶದಲ್ಲಿ ಬುಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ಜೂ. 25ರಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ.

ಸ್ಥಳಿಯ ಹೋಂ ಸ್ಟೇ ಮಾಲೀಕರು ಕುದುರೆಮುಖ ವನ್ಯಜೀವಿ ವಲಯ ಮತ್ತು ಬೆಳ್ತಂಗಡಿ ವಲಯ ಅರಣ್ಯ ಅಧಿಕಾರಿ ಇವರಲ್ಲಿ ಹೋಂ ಸ್ಟೇ ಕುರಿತ ದಾಖಲಾತಿಗಳನ್ನು ನೀಡಿ ಕಡ್ಡಾಯವಾಗಿ ಜೂನ್ ಅಂತ್ಯದ ಒಳಗೆ ನೋಂದಾಯಿಸಿಕೊಳ್ಳಬೇಕು ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya
error: Content is protected !!