ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜು. 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಶೀಘ್ರ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

ಇತ್ಯರ್ಥ ಪಡಿಸಿಕೊಳ್ಳಬಹುದಾದ ಪ್ರಕರಣ: ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಛೇದನ ಪ್ರಕರಣ ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್, ನೀರಿನ ಶುಲ್ಕಕ್ಕೆ ಸಂಬಂಧ ಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿತ, ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಬಹುದು ಎಂದು ತಿಳಿಸಲಾಗಿದೆ.

Related posts

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!