23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ರಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ಇವರು ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಳಿಕ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಸದಸ್ಯರಾಗಿ, ಉಪಾಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಅವರು 2013 ರಿಂದ 2018 ರ ತನಕ ಕರ್ನಾಟಕ ರಾಜ್ಯ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಅವರ ಹುಟ್ಟೂರು ಲಾಯಿಲದಲ್ಲಿ ನಡೆಯಲಿದ್ದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪಡ್ಲಾಡಿ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಂಬ ಮಾಹಿತಿ ತಿಳಿದು ಬಂದಿದೆ.

Related posts

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!