22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ರಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ಇವರು ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಳಿಕ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಸದಸ್ಯರಾಗಿ, ಉಪಾಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಅವರು 2013 ರಿಂದ 2018 ರ ತನಕ ಕರ್ನಾಟಕ ರಾಜ್ಯ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಅವರ ಹುಟ್ಟೂರು ಲಾಯಿಲದಲ್ಲಿ ನಡೆಯಲಿದ್ದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪಡ್ಲಾಡಿ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಂಬ ಮಾಹಿತಿ ತಿಳಿದು ಬಂದಿದೆ.

Related posts

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya
error: Content is protected !!