September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ರಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ಇವರು ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಳಿಕ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಸದಸ್ಯರಾಗಿ, ಉಪಾಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಅವರು 2013 ರಿಂದ 2018 ರ ತನಕ ಕರ್ನಾಟಕ ರಾಜ್ಯ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಅವರ ಹುಟ್ಟೂರು ಲಾಯಿಲದಲ್ಲಿ ನಡೆಯಲಿದ್ದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪಡ್ಲಾಡಿ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಂಬ ಮಾಹಿತಿ ತಿಳಿದು ಬಂದಿದೆ.

Related posts

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya
error: Content is protected !!