28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಬೆಳ್ತಂಗಡಿ :ಅಳದಂಗಡಿ ತಿಮ್ಮಣ್ಣರಸರಾದ ಡಾ, ಪದ್ಮ ಪ್ರಸಾದ ಅಜಿಲರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಮಾತನಾಡಿ ನಾನಾ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬ ಆತಂಕದ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಯಂತ್ರ ಶ್ರೀ ಯೋಜನೆಯಿಂದ ರೈತರ ಉತ್ತೇಜನ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ ಭತ್ತ ಕೃಷಿ ಮಾಡುವ ರೈತರು ಕೂಲಿ ಕಾರ್ಮಿಕರ ಕೊರತೆಯಿಂದ ಕೃಷಿಯನ್ನು ಕೈ ಬಿಡುವ ಯೋಚನೆ ಮಾಡಬಾರದು ಯಂತ್ರೋಪಕರಣಗಳನ್ನು ಬಳಸಿ ಭತ್ತ ಕೃಷಿ ಮಾಡಬೇಕು, ಕೃಷಿ ಪೂರಕ ಚಟುವಟಿಕೆಗಳಿಗೆ ನೆರವಾಗುವುದು ಯೋಜನೆಯ ಉದ್ಧೇಶವಾಗಿದೆ ಎಂದು ಶುಭನುಡಿದರು.

ಸತ್ಯದೇವತೆ ದೇವಸ್ಥಾನ ಆಡಳಿತ ಮುಖ್ಯಸ್ಥರಾದ ಶಿವಪ್ರಸಾದ್ ಅಜಿಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯಂತ್ರಶ್ರೀ ನಾಟಿಗೆ ಸಸಿ ಮಡಿ ಹಸ್ತಾಂತರಿಸಿ ಶುಭನುಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಹರೀಶ್ ಮಡಿವಾಳ, ಹಾಗೂ ಹರೀಶ್ಆಚಾರ್ಯ, ಹಾಗೂ ಯಂತ್ರ ಬ್ಯಾಂಕ್ ಮ್ಯಾನೇಜರ್ ಉಮೇಶ್, ಅಳದಂಗಡಿ ವಲಯದ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಸಿ.ಹೆಚ್.ಎಸ್.ಸಿ ಮೆನೇಜರ್ ಸಚಿನ್, ಹಾಗೂ ಸಂತೋಷ, ಒಕ್ಕೂಟದ ಉಪಾಧ್ಯಕ್ಷರು ಸದಾನಂದ, ಯಂತ್ರಶ್ರೀ ಯೋಧ ಪ್ರಶಾಂತ್ ಚಿತ್ತಾರ, ಶ್ರೀನಿವಾಸ್, ಸೇವಾಪ್ರತಿನಿಧಿ ಶುಭಲತಾ ಹಾಗೂ ಪ್ರಗತಿ ಬಂಧು ತಂಡದ ರೈತರು ಮುಂತಾದವರು ಉಪಸಿತರಿದ್ದರು.

Related posts

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya
error: Content is protected !!